ಇಂಗ್ಲೀಷ್ ಪ್ರಬಂಧ ಸ್ಪರ್ಧೆ: ಧನ್ಯ ಪ್ರಭು ರಾಜ್ಯ ಮಟ್ಟಕ್ಕೆ ಆಯ್ಕೆ

Dhanya-Prabhuಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನ S.B.R.R. ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಧನ್ಯ ಪ್ರಭು ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಉಪ್ಪಿನಂಗಡಿಯ ರಾಮನಗರದ ಚಂದ್ರಶೇಖರ ಪ್ರಭು ಮತ್ತು ನಯನ ಪ್ರಭು ದಂಪತಿಗಳ ಪುತ್ರಿ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

Highslide for Wordpress Plugin