ಕನಸುಗಳು-2013 ರ ಇಂಚರ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ವರದಿ

ಕನಸುಗಳು 2013 ಇಂಚರ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವು ದಿನಾಂಕ 30-11-2013 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಈ ಸ್ಪರ್ಧಾ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ವಿವೇಕಾನಂದ ಬಿ. ಎಡ್. ಕಾಲೇಜಿನ ಉಪನ್ಯಾಸಕಿ ಡಾ.ಶೋಭಿತಾ ಎಸ್. ರಾವ್, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ವಿಭಾಗದ ಉಪನ್ಯಾಸಕರಾದ ಶ್ರೀ ಮನೋಹರ್ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಿದ್ಯಾ ಇವರು ಸಹಕರಿಸಿದರು.

ಇಂಚರ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಆರು ಶಾಲೆಗಳಿಗೆ ಬಹುಮಾ ಕೊಡಲಾಯಿತು. ಈ ಕಾರ್ಯಕ್ರಮದ ಸಂಯೋಜಕರಾಗಿ ಶ್ರೀಮತಿ ಯಶವಂತಿ ಮತ್ತು ಶ್ರೀಮತಿ ವಿದ್ಯಾಪಾರ್ವತಿ, ಉಪನ್ಯಾಸಕರು ವಿವೇಕಾನಂದ ಪದವಿ ಪೂರ್ವ ಕಾಲೇಜು ಇವರು ಕಾರ್ಯನಿರ್ವಹಿಸಿದರು.

Highslide for Wordpress Plugin