ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಸ್ಫರ್ಧೆ : ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜ್ಞಾನ -ವಿಜ್ಞಾನ ಸ್ಫರ್ಧೆಗಳಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

DSC_0001

ವಿಜ್ಞಾನ ಪ್ರದರ್ಶನ ಸ್ಫರ್ಧೆಯಲ್ಲಿ ಪ್ರಥಮ ಪಿ.ಯು.ಸಿಯ ಸ್ವಸ್ಥಿಕ್‌ ಪದ್ಮ ಪ್ರಥಮ ಸ್ಥಾನ, ಗಣಿತ ಪ್ರದರ್ಶನ ಸ್ಫರ್ಧೆಯಲ್ಲಿ ಪ್ರಥಮ ಪಿ.ಯು.ಸಿಯ ಶ್ರೀ ಹರ್ಷ ಇವರು ಪ್ರಥಮ ಸ್ಥಾನ ಮತ್ತು ಸಂಸ್ಕ್ರತಿ ಜ್ಞಾನ ರಸಪ್ರಶ್ನೆ ಸ್ಫರ್ಧೆಯಲ್ಲಿ ಸ್ಕಂದ ಎಸ್. ಭಟ್ , ವಿಶ್ರಾಂತ್ ಮತ್ತು ಪ್ರಣವ. ಕೆ ಇವರ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿ.ಯು.ಸಿಯ ನಿಶ್ಚಿತ್ ರೈ ಎಸ್ , ವಿಖ್ಯಾತ್ ಜೆ.ಯು ಮತ್ತು ಶರಣ್ ಪಿ. ಇವರು ವಿಜ್ಞಾನ ಪ್ರದರ್ಶನ ಸ್ಫರ್ಧೆಗಳಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ. ವಿಜ್ಞಾನ ಲೇಖನ ಹಾಗೂ ವಾಚನ ಸ್ಫರ್ಧೆಯಲ್ಲಿ ಪ್ರಥಮ ಪಿ.ಯು.ಸಿಯ ಸ್ಮsತಿಕಾ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

Highslide for Wordpress Plugin