ಪದವಿ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ವಿಜೇತರಿಗೆ ಅಭಿನಂದನಾ ಸಮಾರಂಭ

ಮಂಗಳೂರು ವಿಶ್ವವಿದ್ಯಾಲಯ 2016-17 ರಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ರ್‍ಯಾಂಕ್ ಗಳಿಸಿದ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀವತ್ಸ ಸಿ.ಎಸ್ (ಬಿ.ಎಸ್ಸ್.ಸಿ ವಿಭಾಗದಲ್ಲಿ ಪ್ರಥಮ ರ್ಯಾಂಕ್), ಸ್ಪೂರ್ತಿ ಎನ್. ಶೆಟ್ಟಿ (ವಾಣಿಜ್ಯ ವಿಭಾಗದಲ್ಲಿ ಮೂರನೇ ರ್ಯಾಂಕ್), ವೈಶಾಲಿ ಪ್ರಭು (ವಾಣಿಜ್ಯ ವಿಭಾಗದಲ್ಲಿ ನಾಲ್ಕನೇ ರ್ಯಾಂಕ್), ಕೃತಿಕಾ ಬಿ.ಎಚ್ (ವಾಣಿಜ್ಯ ವಿಭಾಗದಲ್ಲಿ ಐದನೇ ರ್ಯಾಂಕ್) ಇವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸಮ್ಮಾನಿಸಲಾಯಿತು.

Facilitation

ಈ ಸಂದರ್ಭದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಪರವಾಗಿ ಸಮ್ಮಾನಕ್ಕೆ ಉತ್ತರಿಸಿದ ಶ್ರೀವತ್ಸ ಸಿ.ಎಸ್ ವಿದ್ಯಾರ್ಥಿಗಳು ಕಾಲೇಜನ್ನು ಬಿಟ್ಟು ಹೋದ ನಂತರವೂ ಅವರ ಸಾಧನೆಯನ್ನು ಗುರುತಿಸಿ ಸಮ್ಮಾನಿಸಿರುವುದು ನಮಗೆ ಹೆಮ್ಮೆ ತಂದಿದೆ. ಇನ್ನೂ ಅನೇಕ ಸಾಧನೆಗಳನ್ನು ಮಾಡಲು ಇದು ನಮಗೆ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ, ಸಂಚಾಲಕ ಸಂತೋಷ್, ಸದಸ್ಯರಾದ ರವಿಮುಂಗ್ಲಿಮನೆ, ವತ್ಸಲಾರಾಜ್ಙಿ, ಶಿಕ್ಷಕ-ರಕ್ಷಕ ಸಂಘದ ಸದಸ್ಯ ಶಿವರಾಮ ಭಟ್ ವಿದ್ಯಾರ್ಥಿಗಳನ್ನು ಸಮ್ಮಾನಿಸಿದರು.

Highslide for Wordpress Plugin