ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಹೆತ್ತವರ ಸಮಾವೇಶ

ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ನೂತನವಾಗಿ ಸೇರ್ಪಡೆಯಾದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಹಾಗೂ ಅವರ ಹೆತ್ತವರ ಸಮಾವೇಶ ಜೂನ್ 5 ಮತ್ತು 6 ರಂದು ಜರುಗಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಉರಿಮಜಲು ರಾಮ ಭಟ್ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಪೈ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ, ಸಂಚಾಲಕರಾದ ಶ್ರೀ ಎಮ್.ಟಿ. ಜಯರಾಮ ಭಟ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಭಟ್, ಗೌರವಾಧ್ಯಕ್ಷರಾದ ಶ್ರೀ ರವೀಂದ್ರ ಎಚ್.ವಿ. ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನದಾಸ್ ಉಪಸ್ಥಿತರಿದ್ದರು.

1.vivekananda-puc--parents-meet(science)

ರಸಾಯನಶಾಸ್ತ್ರ ವಿಭಾಗದ ಶ್ರೀಮತಿ ದಯಾಮಣಿ ಟಿ.ಕೆ. ಕಾರ್‍ಯಕ್ರಮ ನಿರೂಪಿಸಿದರು. ಜೀವಶಾಸ್ತ್ರ ವಿಭಾಗದ ಶ್ರೀಮತಿ ಅನುಪಮ ಶೇಟ್ ಸ್ವಾಗತಿಸಿದರು. ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥರಾದ ಶ್ರೀ ಪ್ರಸಾದ್ ಶಾನ್‌ಭಾಗ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಸಾಯನಶಾಸ್ತ್ರ ವಿಭಾಗದ ಕುಮಾರಿ ಹರ್ಷಿತ ವಂದಿಸಿದರು.

Highslide for Wordpress Plugin