ವಾರ್ಷಿಕ ಕ್ರೀಡಾಕೂಟ- 2016

ಮನುಷ್ಯನ ಇರುವಿಕೆ ಇತರರ ಗಮನಕ್ಕೆ ಬಾರದಿದ್ದರೂ, ಸತತ ಪ್ರಯತ್ನದ ಮೂಲಕ ಆಗುವ ಗೆಲುವಿನಿಂದ ಎಲ್ಲರ ಮನೆ ಮಾತಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪೀಟರ್ ವಿಲ್ಸನ್ ಪ್ರಭಾಕರ್ ತಿಳಿಸಿದರು.

DSC_1195

DSC_1183

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಕಲಿಕೆಯ ಜೊತೆಗೆ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ಬೆಳವಣಿಗೆ ಅವಶ್ಯಕ. ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕಠಿಣ ಪರಿಶ್ರಮ ಮತ್ತು ಕ್ರೀಡಾಸ್ಫೂರ್ತಿಯಿಂದ ಮಾತ್ರ ಕ್ರೀಡೆಯಲ್ಲಿ ಗೆಲುವು ಸಾಧಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕ್ರೀಡಾ ಕಾರ್ಯದರ್ಶಿ ರಂಜಿತ್ ಇವರು ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿದರು. ಕಾಲೇಜಿನ ವಿದ್ಯಾರ್ಥಿನಿ ಸಮೀಕ್ಷಾ ಸ್ವಾಗತಿಸಿ, ಪೂಜಾ ನಾಯಕ್ ವಂದಿಸಿದರು.

Highslide for Wordpress Plugin