ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ

ಪ್ರತಿಯೊಬ್ಬ ವ್ಯಕ್ತಿಯಲ್ಲೂ ವ್ಯಕ್ತಿತ್ವವಿರುತ್ತದೆ. ಅದು ವಿಕಸನಗೊಳ್ಳಬೇಕಾದರೆ ಪ್ರಯತ್ನ ಅಗತ್ಯ ಎಂದು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀ ಸೂರ್ಯನಾರಾಯಣ ಬಿ.ವಿ ಯವರು ಹೇಳಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹೇಗೆ ತಯಾರಿ ನಡೆಸಬೇಕು, ಹೇಗೆ ಪರೀಕ್ಷೆಗಳನ್ನು ಎದುರಿಸಬೇಕು ಎಂಬದನ್ನು ತಿಳಿಸಿದರು. ಸಮಸ್ಯೆಗಳನ್ನು ಎದುರಿಸಲು ಬೇಕಾದ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕಾಲೇಜಿನ ಸಂಚಾಲಕ ಶ್ರೀ ಜಯರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ವಿದ್ಯಾರ್ಥಿ ನಾಯಕ ಜಯರಾಮ ಸ್ವಾಗತಿಸಿ ಕಾರ್ಯದರ್ಶಿ ಭರತ್ ಚಂದ್ರ ವಂದಿಸಿದರು. ವಿದ್ಯಾರ್ಥಿ ಶ್ರೀ ವತ್ಸ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲ ಶ್ರೀ ಜೀವನದಾಸ್ ಮತ್ತು ವಿದ್ಯಾರ್ಥಿ ಕ್ಷೇಮಪಾಲಕರಾದ ಮುರಳಿ ಪಿ.ಜಿ, ನಳಿನ ಕುಮಾರಿ, ವಿನೋದ ಸರಸ್ವತಿ ಉಪಸ್ಥಿತರಿದ್ದರು.

Highslide for Wordpress Plugin