ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. 2016-2018 ರ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರಿಗೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀವಸಂತ ಭಟ್ ಇವರು ಅಧಿಕಾರವನ್ನು ಹಸ್ತಾಂತರಿಸಿದರು.

DSC_0674

ಬಳಿಕ ಶ್ರೀಮತಿ ಶ್ಯಾಮಲ ಮಾತನಾಡಿ ಈ ವಿದ್ಯಾಸಂಸ್ಥೆಯ ಏಳಿಗೆಗಾಗಿ ವಿಶೇಷ ಶ್ರಮ ವಹಿಸುತ್ತೇನೆ ಎಂದು ಭರವಸೆಯಿತ್ತರು. ಶಿಕ್ಷಕ- ರಕ್ಷಕ ಸಂಘದ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಮಂಗಳ ಗೌರಮ್ಮ ಆಯ್ಕೆಯಾದರು.

ನಿಕಟ ಪೂರ್ವ ಅಧ್ಯಕ್ಷರಾದ ಶ್ರೀವಸಂತ ಭಟ್ ಮಾತನಾಡಿ ವಿದ್ಯಾರ್ಥಿಗಳು ಇತ್ತೀಚೆಗೆ ಉತ್ತಮ ಅಂಕಗಳನ್ನು ತೆಗೆಯುತ್ತಿದ್ದಾರೆ, ಆದರೆ ಅವರಲ್ಲಿ ಮೂಲಜ್ಞಾನದ ಕೊರತೆ ಎದ್ದು ಕಾಣುತ್ತಿದೆ. ಅಧ್ಯಾಪಕರು ವಿದ್ಯಾರ್ಥಿಗಳಲ್ಲಿ ಈ ಜ್ಞಾನವನ್ನು ತುಂಬಿಸಬೇಕು ಎಂದು ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಪೈ, ಸಂಚಾಕರಾದ ಎಂ.ಟಿ. ಜಯರಾಮ ಭಟ್, ನಿಕಟ ಪೂರ್ವ ಗೌರವಾಧ್ಯಕ್ಷರಾದ ಶ್ರೀ ರವೀಂದ್ರ ಹೆಚ್. ವಿ, ಖಜಾಂಚಿಯಾದ ಶ್ರೀ ಕೋಟ್ಯಪ್ಪ ಪೂಜಾರಿ, ಪ್ರಾಂಶುಪಾಲರಾದ ಶ್ರೀಜೀವನ್ ದಾಸ್, ಶಿಕ್ಷಕ -ರಕ್ಷಕ ಸಂಘದ ನೂತನ ಸದಸ್ಯರು ಉಪಸ್ಥಿತರಿದ್ದರು.

ರಸಾಯನ ಶಾಸ್ತ್ರದ ಉಪನ್ಯಾಸಕಿಯಾದ ಶ್ರೀಮತಿ ದಯಾಮಣಿ ಕಾರ್ಯಕ್ರiವನ್ನು ನಿರೂಪಿಸಿದರು. ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕಿ ಶ್ರೀಮತಿ ನಮಿತ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರತ್ನಾವತಿ ವಂದಿಸಿದರು.

Highslide for Wordpress Plugin