ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ನವೆಂಬರ್ 2 ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿ ಶಕ್ತಿಯೇ ರಾಷ್ಟ್ರಶಕ್ತಿ. ಸ್ವಚ್ಛತೆಯ ಮೂಲವೇ ಮನಸ್ಸು. ನಮ್ಮ ಪರಿಸರವನ್ನು ಸ್ವಚ್ಛಗೊಳಿಸುವ ಜೊತೆ ಜೊತೆಗೆ ಮನಸ್ಸನ್ನು ಶುದ್ಧಗೊಳಿಸಬೇಕು. ಈ ಮೂಲಕ ಸ್ವಚ್ಛ ಭಾರತದ ನಿರ್ಮಾಣಕ್ಕೆ ನಾವೆಲ್ಲರೂ ಕೈ ಜೋಡಿಸೋಣ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

DSC_1073

DSC_1067

DSC_1072

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ, ಸಂಚಾಕರಾದ ಶ್ರೀ ಸಂತೋಷ್ ಬಿ, ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರವಿ ಮುಂಗ್ಲಿಮನೆ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ,ಪ್ರಾಂಶುಪಾಲರಾದ ಶ್ರೀಜೀವನ್‌ದಾಸ್ ಉಪಸ್ಥಿತರಿದ್ದರು.

ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳೆಲ್ಲರೂ ಕಾಲೇಜಿನ ಕ್ಯಾಂಪಸ್, ರಸ್ತೆಯ ಆಸುಪಾಸಿನಲ್ಲಿ ಕಸವನ್ನು ಹೆಕ್ಕುವುದರ ಮೂಲಕ ಸ್ವಚ್ಛತೆಯನ್ನು ಕೈಗೊಂಡರು.

Highslide for Wordpress Plugin