ವಿವೇಕಾನಂದ ಪ.ಪೂ.ಕಾಲೇಜಿನಲ್ಲಿ ‘ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ-2014’

ಪುತ್ತೂರು : ಗ್ರಾಮೀಣ ಪ್ರದೇಶದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂತರ್ಜಾಲವನ್ನು ಪರಿಚಯಿಸುವ ಕರ್ನಾಟಕ ಸರ್ಕಾರದ ಯೋಜನೆಯಾದ ವಿದ್ಯಾರ್ಥಿ ಅಂತರ್ಜಾಲ ಪ್ರಪಂಚ-2014 ಕಾರ್ಯಕ್ರಮದ ಉದ್ಘಾಟನೆ ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ ನಡೆಯಿತು. ಆಡಳಿತ ಮಂಡಳಿ ಸಂಚಾಲಕ ಎಂ. ಟಿ. ಜಯರಾಮ ಭಟ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಪ್ರಾಚಾರ್ಯರಾದ ಜೀವನ್‌ದಾಸ್ ಉಪಸ್ಥಿತರಿದ್ದರು. ಗಣಕಶಾಸ್ತ್ರ ವಿಭಾಗ ಮುಖ್ಯಸ್ಥರಾದ ರೋಹಿತ್ ಅವರು ಸ್ವಾಗತಿಸಿ, ಕ್ಷೇತ್ರ ಶಿಕ್ಷಣ ಸಂಯೋಜಕರಾದ ಉದಯ್ ಶಂಕರ್ ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕಿ ದೀಪ್ತಿ ಹಾಗೂ ವಿದ್ಯಾರ್ಥಿನಿ ತನ್ವಿ ಪ್ರಾರ್ಥಿಸಿದರು. ರಕ್ಷಿತಾ ನಿರೂಪಿಸಿದರು.

DSC_0030

Highslide for Wordpress Plugin